ದೆಹಲಿ : 74ನೇ ಗಣರಾಜ್ಯೋತ್ಸವ ಸಂಭ್ರಮ: ಪಥಸಂಚಲನಕ್ಕೆ ಕರ್ತವ್ಯಪಥ ಸಜ್ಜು,
74ನೇ ಗಣರಾಜೋತ್ಸವ ಪರೇಡ್ಗೆ ದೆಹಲಿಯ ಕರ್ತವ್ಯ ಪಥ್ ಸಿದ್ಧವಾಗಿದ್ದು, ಈ ಬಾರಿಯ ಗಣರಾಜ್ಯೋತ್ಸಕ್ಕೆ ಈಜಿಪ್ಟ್ ಅಧ್ಯಕ್ಷರು ವಿಶೇಷ ಅತಿಥಿಯಾಗಿ ಭಾಗಿಯಾಗುತ್ತಿದ್ದಾರೆ. ಪರೇಡ್ಗೆ 65,000 ಮಂದಿ ಸಾಕ್ಷಿಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ನಿಯೋಜನೆಗೊಳಿಸಲಾಗಿದೆ.
ಕ್ಯುಆರ್ ಕೋಡ್ ಮೂಲಕ ನೋಂದಣಿ ಆದವರಿಗೆ ಪರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ನೀಡಲಾಗಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಬಿಗಿ ಭದ್ರತೆ ನಿಯೋಜಿಸಲಾಗಿದ್ದು, ಸುಮಾರು 6,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ವರದಿ: ಸಿಂಚನ ಕೆ

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



