ಆರ್ಯ ಈಡಿಗ ಸಂಘ ಕೋಳಿಕಾಲುಗುಡ್ಡ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ – ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು

ಇಂದು ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಆರ್ಯ ಈಡಿಗ ಸಂಘ ಕೋಳಿಕಾಲುಗುಡ್ಡ, ತೀರ್ಥಹಳ್ಳಿ ಇವರ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ಎಸ್.ಬಂಗಾರಪ್ಪ ಮತ್ತು ಪುನೀತ್ ರಾಜ್ ಕುಮಾರ್ ರವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾದರು.

ಈ ಸಂಧರ್ಭದಲ್ಲಿ ಹಿರಿಯರಾದ ಕಾಗೋಡು ತಿಮ್ಮಪ್ಪನವರು , ಶ್ರೀ ರೇಣುಕಾನಂದ ಸ್ವಾಮಿಗಳು, ಸಿಗಂಧೂರಿನ ಧರ್ಮದರ್ಶಿಗಳಾದ ರಾಮಪ್ಪನವರು, ಸಚಿವರಾದ ಮಧು ಬಂಗಾರಪ್ಪನವರು, ಶಾಸಕರಾದ ಆರಗ ಜ್ಞಾನೇಂದ್ರರವರು , ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ರವರು, ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಆರ್.ಎಂ.ಮಂಜುನಾಥ ಗೌಡರು ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.
