
ನೆಲಮಂಗಲ:ಕ್ಷೇಮ ವನ ಪ್ರಕೃತಿ ಚಿಕಿತ್ಸಾ ಕೇಂದ್ರ ಉದ್ಘಾಟಿಸಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವಾರ ಟ್ರಸ್ಟ್ ವತಿಯಿಂದ ನೆಲಮಂಗಲ ಬಳಿ ನಿರ್ಮಿಸಿರುವ ಕ್ಷೇಮ ವನ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು.
ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ, ಸಚಿವರಾದ ಡಾ. ಕೆ. ಸುಧಾಕರ್, ನಾರಾಯಣಗೌಡ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ವರದಿ : ನಂದಿನಿ ಮೈಸೂರು



