ಬೆಂಗಳೂರು: ಚಿಕ್ಕಬಳ್ಳಾಪುರ ನಗರದಿಂದ ಬೆಂಗಳೂರಿಗೆ ಸಂಚರಿಸುವ ಬಿಎಂಟಿಸಿ ಬಸ್ ಗೆ ಚಾಲನೆ ನೀಡಿದರು.
ಚಿಕ್ಕಬಳ್ಳಾಪುರ ನಗರದಿಂದ ಬೆಂಗಳೂರಿಗೆ ಸಂಚರಿಸಲು ನೂತನವಾಗಿ ಆರಂಭಿಸಲಾಗಿರುವ ಬಿಎಂಟಿಸಿ ಬಸ್ ಸೇವೆಗೆ ನಗರದ ಹಳೆ ಬಸ್ ಸ್ಟ್ಯಾಂಡ್ ಆವರಣದಲ್ಲಿ ಇಂದು ಅಧಿಕೃತವಾಗಿ ಡಾ.ಸುಧಾಕರ್ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ಜನತೆಯ ಬಹುದಿನಗಳ ಕನಸು ಇಂದು ನನಸಾಗಿದ್ದು, ನಗರದ ಸಾರಿಗೆ ಸಂಪರ್ಕ ವ್ಯವಸ್ಥೆಯಲ್ಲಿ ಹೊಸ ಪರ್ವ ಆರಂಭವಾಗಿದೆ. ಬಿಎಂಟಿಸಿ ಬಸ್ಸುಗಳ ಓಡಾಟದಿಂದ ದಿನನಿತ್ಯ ಬೆಂಗಳೂರಿಗೆ ಓಡಾಡುವ ರೈತರು, ವಿದ್ಯಾರ್ಥಿಗಳು, ಸಣ್ಣ ವ್ಯಾಪಾರಸ್ಥರು, ಉದ್ಯೋಗಿಗಳಿಗೆ ಅನುಕೂಲವಾಗಲಿದ್ದು, ಜಿಲ್ಲೆಯ ಆರ್ಥಿಕ ಪ್ರಗತಿಗೂ ವೇಗ ದೊರೆಯಲಿದೆ. ಆರಂಭದಲ್ಲಿ ಪ್ರಾಯೋಗಿಕವಾಗಿ ಎರಡು ಬಸ್ಸುಗಳಿಗೆ ಚಾಲನೆ ದೊರೆತಿದ್ದು ಮುಂದಿನ ದಿನಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು.
ವರದಿ: ನಂದಿನಿ ಮೈಸೂರು.



