ಮೈಸೂರು: ಅರ್ಜುನ್ ರಮೇಶ್ ನಾಯಕನಾಗಿ ನಟಿಸಿರುವ “ಕೌಟಿಲ್ಯ” ಚಿತ್ರ ಆಗಸ್ಟ್ 26 ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಚಿತ್ರ ತಂಡ ಖುಷಿ ಹಂಚಿಕೊಂಡಿದೆ.

ಕೌಟಿಲ್ಯ ಚಿತ್ರ ಪ್ರೇಕ್ಷಕರ ಮನ ತಲುಪಿದೆ.ನಾನು
ಚಿತ್ರದಲ್ಲಿ ಆರ್ಕಿಟೆಕ್ಟ್ ಇಂಜಿನಿಯರ್ ಪಾತ್ರ. ಒಬ್ಬ ಇಂಜಿನಿಯರ್ ಚಾಣಕ್ಯನ ತಂತ್ರಗಳನ್ನು ಯಾವ ರೀತಿ ಬಳಸಿಕೊಳ್ಳುತ್ತಾನೆ ಎನ್ನುವುದನ್ನು ಈ ಚಿತ್ರದಲ್ಲಿ ನೋಡಬಹುದು ಎಂದು ನಾಯಕ ಅರ್ಜುನ್ ರಮೇಶ್ ತಿಳಿಸಿದರು.
ನನ್ನನ್ನು ಧಾರಾವಾಹಿಗಳಲ್ಲಿ ಮುಗ್ಧ ಹುಡುಗಿಯ ಪಾತ್ರದಲ್ಲಿ ನೋಡಿದ್ದೀರಿ.
ನಾನು ಈ ಚಿತ್ರದಲ್ಲಿ ಪತ್ರಕರ್ತೆಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ.
ವಿಭಿನ್ನ ಪಾತ್ರ ನೀಡಿರುವ ನಿರ್ದೇಶಕರಿಗೆ ಧನ್ಯವಾದ ಎನ್ನುತ್ತಾರೆ ನಾಯಕಿ ಪ್ರಿಯಾಂಕ ಚಿಂಚೋಳಿ.
ಸುದ್ದಿಗೋಷ್ಟಿಯಲ್ಲಿ
ನಿರ್ದೇಶಕ ಪ್ರಭಾಕರ್ ಶೇರಖಾನೆ,ಸೇರಿದಂತೆ ಚಿತ್ರ ತಂಡ ಹಾಜರಿದ್ದರು.
ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

