ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಬರ್ಬರವಾಗಿ ಹತ್ಯೆಗೈದ ಘಟನೆ ಲಗ್ಗೆರೆ ಬಳಿಕ ಚೌಡೇಶ್ವರಿನಗರದ ಹಳ್ಳಿರುಚಿ ಹೋಟೆಲ್ ಬಳಿ ನಡೆದಿದೆ.
ನಿನ್ನೆ(ಬುಧವಾರ) ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಎಂಬುವವರನ್ನು ಬೈಕ್ಗಳಲ್ಲಿ ಬಂದ ಐದಾರು ದುಷ್ಕರ್ಮಿಗಳು ಹತ್ಯೆ ಮಾಡಿ ಎಸ್ಕೇಪ್ ಅಗಿದ್ದಾರೆ. CMH ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಹಳ್ಳಿರುಚಿ ಹೊಟೇಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡದ್ದಾರೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಲಾಗಿದೆ.
ರವಿ ಕೊಲೆ ಮಾಡಿದ ಹಂತಕರು ಕೊಲೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ರವಿಕುಮಾರ್ ಅವರ ಫ್ಲೆಕ್ಸ್ ಹರಿದು ಹಾಕಿದ್ದಾರೆ. ಬಳಿಕ ರವಿ ಮನೆ ಮುಂದೆ ಬಂದು ಕಾದು ಕುಳಿತಿದ್ದರು. ಮೇ 24ರಂದು ಕಾಂಗ್ರೆಸ್ ಮುಖಂಡ ಹಾಗೂ ಫೈನಾನ್ಷಿಯರ್ ಕೃಷ್ಣ ಮೂರ್ತಿ ಹುಟ್ಟುಹಬ್ಬ ಇತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ನೂರಾರು ಕಾರ್ಯಕರ್ತರು ಆಗಮಿಸಿದ್ದರು. ಇದೇ ಹುಟ್ಟುಹಬ್ಬದಲ್ಲಿ ಭಾಗವಹಿಸಲು ರವಿ ಹೊರಗಡೆ ಬರುವಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ತಪ್ಪಿಸಿಕೊಳ್ಳುವ ಭರದಲ್ಲಿ ಓಡಿದ ರವಿಯನ್ನು ಅಟ್ಟಾಡಿಸಿಕೊಂಡು ಬಂದ ಹಂತಕರು ಕೊಚ್ಚಿ ಕೊಲೆ ಮಾಡಿ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ.
ಸದ್ಯ ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.



