ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ- ಶಾಸಕ ಗೋಪಾಲ ಕೃಷ್ಣ ಬೇಳೂರು.
ದಿನಾಂಕ ; 17-04-2023ರ ಸೋಮವಾರ ಮಧ್ಯಾಹ್ನ 12-00 ಗಂಟೆಗೆ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ರ ಸಾಗರ-ಹೊಸನಗರ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾಗಿರುವ ಗೋಪಾಲಕೃಷ್ಣ ಬೇಳೂರುರವರವರು ಕಾಂಗ್ರೆಸ್ ಕಚೇರಿ ಗಾಂಧಿಮಂದಿರದಿಂದ ಕಾಲ್ನಡಿಗೆಯ ಮೂಲಕ ಸಾಗರ ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿರುವ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆಯ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮದಲ್ಲಿ ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರು, ಮಾಜಿ ಶಾಸಕಿ ಪ್ರಫುಲ್ಲರವರು, ಶಿವಮೊಗ್ಗ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಸುಂದರೇಶ್, ಆರ್.ಎಂ. ಮಂಜುನಾಥಗೌಡ, ಬಿ.ಆರ್. ಜಯಂತ್, ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಕಲಗೋಡು ರತ್ನಾಕರ್, ಐ.ಎನ್. ಸುರೇಶ್’ಬಾಬು, ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಹಕ್ರೆ,

ಮಾಜಿ ಬ್ಲಾಕ್ ಅಧ್ಯಕ್ಷರಾದ ಎಲ್.ಟಿ.ತಿಮ್ಮಪ್ಪ ಹೆಗಡೆ, ಕೆ.ಹೊಳಿಯಪ್ಪ, ಮಕ್ಬುಲ್ ಅಹಮದ್, ರವಿಕುಮಾರ್ ಹುಣಾಲುಮಡಿಕೆ, ವಿರೇಶ್’ಗೌಡ್ರು, ಹೊಸನಗರ ಅಧ್ಯಕ್ಷ ಬಿ.ಜಿ. ನಾಗರಾಜ್, ಮಹಿಳಾ ಜಿಲ್ಲಾ ಅಧ್ಯಕ್ಷೆ ಅನಿತಾಕುಮಾರಿ, ಸಾಗರ ಕಾಂಗ್ರೇಸ್ ಮಹಿಳಾ ಅಧ್ಯಕ್ಷೆ ಸುಮಂಗಲರಾಮಕೃಷ್ಣ, ನಗರ ಮಹಿಳಾ ಅಧ್ಯಕ್ಷೆ ಮಧುಮಾಲತಿ ಕಲ್ಲಪ್ಪ, ಪರಿಮಳ ಮಂಜುನಾಥ, ಎನ್. ಲಲಿತಮ್ಮ ಕಾಂಗ್ರೇಸ್ ನಗರಸಭಾ ಸದಸ್ಯರುಗಳು, ಕಾಂಗ್ರೇಸ್ ಪಕ್ಷದ ಗ್ರಾಮಾಂತರ ಮತ್ತು ನಗರ ಪದಾಧಿಕಾರಿಗಳು, ಪಕ್ಷದ ಪ್ರಮುಖ ಮುಖಂಡರು, ಕಾರ್ಯಕರ್ತರೊಂದಿಗೆ ಸಾಗಿ ಗೋಪಾಲಕೃಷ್ಣ ಬೇಳೂರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.



